ಹುಬ್ಬಳ್ಳಿ: ನಗರದ ಉಣಕಲ್ ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಚಿಕಿತ್ಸೆ ಫಲಿಸದೇ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.

ಪ್ರಕಾಶ ಬಾರಕೇರ (41) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ನಿನ್ನೆ ಸೋಮವಾರ ಸಂಜೆ ತೇಜಶ್ವರ ಸಾತರೆ ಸಾವನ್ನಪ್ಪಿದ್ದರೆ ಇಂದು ಬೆಳಿಗ್ಗೆ ಪ್ರಕಾಶ ಬಾರಕೇರ ಸಾವನ್ನಪ್ಪಿದ್ದಾರೆ.ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಪ್ರಕಾಶ ಬಾರಕೇರ ಮಗ ವಿನಾಯಕ ಬಾರಕೇರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾನೆ.
ಡಿ. 22 ರಂದು ನಡೆದಂತಹ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಈ ಪೈಕಿ 8 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಉಸಿರು ಚೆಲ್ಲಿದ್ದಾರೆ.