Dinner Politics : ಸದ್ಯ ಕರ್ನಾಟಕ ರಾಜಕೀಯದಲ್ಲಿ ಭಾರೀ ಸದ್ದನ್ನು ಮಾಡುತ್ತಿರುವ ಡಿನ್ನರ್ ಪಾಲಿಟಿಕ್ಸ್ ವಿಚಾರದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಹೆಸರನ್ನು ಎಳೆದು ತಂದಿದ್ದಾರೆ. ಅವರು ಕೂಡಾ ಸಭೆಯನ್ನು ಕರೆದಿದ್ದರು, ಅದರಲ್ಲೂ ಶಾಸಕರು ಭಾಗವಹಿಸಿದ್ದರು. ಅದನ್ನು ಯಾಕೆ ಪ್ರಸ್ತಾವಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು : ಪಕ್ಷದ ವಿಚಾರದಲ್ಲಿ ನನ್ನ ಮಾತೇ ಅಂತಿಮ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಹೇಳಿದ್ದರೂ, ಸಚಿವರ ಹೇಳಿಕೆಗಳು ’ಡಿನ್ನರ್ ಪಾಲಿಟಿಕ್ಸ್’ ಸಂಬಂಧ ಮುಂದುವರಿಯುತ್ತಲೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತೊಮೆ ಗರಂ ಆಗಿದ್ದಾರೆ.
ಒಂದು ದಿನಗಳ ಹಿಂದೆ ತುಮಕೂರಿನಲ್ಲಿ ಮಾತನಾಡುತ್ತಿದ್ದ ಕೆ.ಎನ್.ರಾಜಣ್ಣ, ನಾವೇನೂ ಅವರ ಆಸ್ತಿಯನ್ನು ಬರೆಸಿಕೊಂಡಿದ್ದೀವಾ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿರೋಧಿಗಳಾ ಅವರು. ಎಲ್ಲಾ ತುಂಬಾ ದಿನ ನಡೆಯುವುದಿಲ್ಲ ಎಂದು, ಡಿ.ಕೆ.ಶಿವಕುಮಾರ್ ವಿರುದ್ದ ಕಿಡಿಕಾರಿದ್ದರು.