
ಧಾರವಾಡ: ಹಣಕಾಸಿನ ವಿಚಾರಕ್ಕೆಸಂಬಂಧಿಸಿದಂತೆ ಯುವಕನೋರ್ವಮತ್ತೋರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಧಾರವಾಡದ ಕಂಠಿಗಲ್ಲಿಯಲ್ಲಿ ನಡೆದಿದೆ.

ಮಲ್ಲೀಕ್ ಎಂಬಾತನೇ ಕಂಠಿಗಲ್ಲಿಯ ರಾಘವೇಂದ್ರ ಗಾಯಕವಾಡ (25) ಎಂಬ ಯುವಕನ ಬೆನ್ನಿಗೆ ಚಾಕು ಇರಿದಿದ್ದಾನೆ. ಅರ್ಧ ಕಟ್ ಆದ ಚಾಕು ರಾಘವೇಂದ್ರನ ಬೆನ್ನಿನಲ್ಲೇ ಉಳಿದಿದೆ. ಇನ್ನರ್ಧ ಚಾಕು ಕೆಳಗಡೆ ಬಿದ್ದಿದೆ.ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಚಾಕು ದಾಳಿ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ರಾಘವೇಂದ್ರ ಮನೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೇ ಬಂದಮಲ್ಲೀಕ್ ಚಾಕು ಇರಿದು ಪರಾರಿಯಾಗಿದ್ದಾನೆ. ಸದ್ಯ ರಾಘವೇಂದ್ರನ ಸ್ಥಿತಿ ಗಂಭೀರವಾಗಿದ್ದು,ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಡಿಸಿಪಿ ರವೀಶ್, ಎಸಿಪಿ ಪ್ರಶಾಂತ ಸಿದ್ಧನಗೌಡರ, ಉಪನಗರ ಠಾಣೆ ಇನ್ಸ್ಪೆಕ್ಟರ್ ದಯಾನಂದ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತಂತೆ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.