[ad_1]
ಹುಬ್ಬಳ್ಳಿ: ಇಲ್ಲಿನ ಹಳೇ ಹುಬ್ಬಳ್ಳಿ ಘೋಡಕೆ ಪ್ಲಾಟ್ ನಲ್ಲಿ ಇಬ್ಬರಿಗೆ ಮಾರಕಾಸ್ತ್ರದಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಓರ್ವನ ಕಾಲಿಗೆ ಗುಂಡು ಹೊಡೆದು ಬಂಧನ ಮಾಡಲಾಗಿದೆ ಎಂದು ಹುಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಘೋಡಕೆ ಪ್ಲಾಟ್ ನ ಮಜಬುಲ್ ಎಂಬಾತನೇ ಪೊಲೀಸರಿಂದ ಗುಂಡು ಹೊಡೆಸಿಕೊಂಡಾತ. ಈತ ಕ್ಷುಲ್ಲಕ ಕಾರಣಕ್ಕಾಗಿ ಸೋಮವಾರ ರಾತ್ರಿ ಹಳೇ ಹುಬ್ಬಳ್ಳಿ ಆನಂದನಗರ ರಸ್ತೆ ಘೋಡಕೆ ಪ್ಲಾಟ್ ನ ತಬ್ಲಿಕ್ ಮಸೀದಿ ಬಳಿ ಅದೇ ಪ್ರದೇಶದ ಸಮೀರ ಶೇಖ್ (18) ಹಾಗೂ ಸಮೀರ್ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬುವರಿಗೆ ಮಾರಕಾಸ್ತ್ರದಿಂದ ಇರಿದು ಸಹಚರರೊಂದಿಗೆ ಮುಜಾಮಿಲ್ ಆರೋಪಿ ಪರಾರಿಯಾಗಿದ್ದ, ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೆ ಒಳಗಾದ ಕುಟುಂಬಸ್ಥರಿಗೆ ನನ್ನ ಮೇಲೆ ದೂರು ನೀಡತ್ತೀರಾ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ. ಹಣ್ಣು ಮಕ್ಕಳಿಗೂ ಬೆದರಿಕೆ ಹಾಕಿದ್ದಾನೆ. ಹೆಣ್ಣು ಮಕ್ಕಳನ್ನು ಬಿಡೋಲ್ಲ, ಅಲ್ಲದೇ ಗಾಯಗೊಂಡ ಕುಟುಂಬದವರಿಗೆ ಕರೆ ಮಾಡಿ ದೂರು ನೀಡಿದರೆ ಜೀವಂತ ಬಿಡೋದಿಲ್ಲ ಎಂದು ಬೆದರಿಕೆ ಹಾಕಿ ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಮುಜಾಮಿಲ್ ಹಣದ ಬೇಡಿಕೆ ಇಟ್ಟಿದ್ದಾನೆ.

ನಂತರ ಹೊರವಲಯದಲ್ಲಿ ವಾಹನ ಮೇಲೆ ಬರುತ್ತಿದ್ದ ವ್ಯಕ್ತಿಗೆ ಆರೋಪಿ ಹಾಗೂ ಆತನ ಸಹಚರರು ಹಲ್ಲೆ ಮಾಡಿ ಹಣ ಕಿತ್ತುಕೊಂಡಿದ್ದಾರೆ ಎಂದರು. ಇಂದು ಬೆಳಿಗ್ಗೆ ಆರೋಪಿಯನ್ನು ಬಂಧನ ಮಾಡಲಾಗಿತ್ತು. ಇತರೆ ಆರೋಪಿಗಳನ್ನು ತೋರಿಸುತ್ತೇನೆಂದು ಹೋದ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ಮಾಡಿ ಓಡಿ ಹೋಗುವ ಸಂದರ್ಭ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ತಪ್ಪಿಸಿಕೊಂಡು ಓಡುವ ಸಂದರ್ಭದಲ್ಲಿ ಆತನ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆಂದರು.
ಆರೋಪಿ ಕಾಲಿಗೆ ಗುಂಡು ತಗುಲಿದ್ದು, ಗಾಯಗೊಂಡ ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡ ಇಬ್ಬರು ಸಿಬ್ಬಂದಿಯನ್ನು ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಮೀಷನರ್ ತಿಳಿಸಿದರು.
[ad_2]
Source link